×
Ad

ಉಡುಪಿ: ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ; ಸವಾರ ಮೃತ್ಯು

Update: 2022-03-05 22:47 IST

ಉಡುಪಿ, ಮಾ.5: ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಂಬಾಗಿಲು ಜಂಕ್ಷನ್ ಬಳಿ ಮಾ.4ರಂದು ರಾತ್ರಿ 9.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಬೈಕ್ ಸವಾರ ಕರಂಬಳ್ಳಿಯ ಅಬೂಬಕ್ಕರ್ ಸಿದ್ದಿಕ್(18) ಎಂದು ಗುರುತಿಸಲಾಗಿದೆ. ಸ್ಕೂಟರಿನಲ್ಲಿದ್ದ ಗಣೇಶ್, ಅವರ ಪತ್ನಿ ರೇಖಾ ಹಾಗೂ ಮಗ ಉತ್ತಮ ಎಂಬವರು ಗಾಯಗೊಂಡಿದ್ದಾರೆ.

ಅಬೂಬಕ್ಕರ್ ಸಿದ್ದಿಕ್ ಸಂತೆಕಟ್ಟೆಯಿಂದ ಸವಾರಿ ಮಾಡಿಕೊಂಡು ಬರುತ್ತಿದ್ದ ಬೈಕಿಗೆ ಎದುರಿನಿಂದ ಏಕಮುಖ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಗುಂಡಿಬೈಲು ಕಡೆಯಿಂದ ಅಂಬಾಗಿಲು ಕಡೆಗೆ ಬರುತ್ತಿದ್ದ ಗಣೇಶ್ ಅವರ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆ ಬಿದ್ದು ಗಂಭೀರವಾಗಿ ಗಾಯಗೊಂಡ ಸಿದ್ದಿಕ್, ಚಿಕಿತ್ಸೆ ಫಲಕಾರಿಯಾಗದೆ ಮಾ.5ರಂದು ಬೆಳಗಿನ ಜಾವ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News