ಮಂಗಳೂರು: ಹಿಜಾಬ್‌ಧಾರಿ ವಿದ್ಯಾರ್ಥಿನಿಗೆ ಹಲ್ಲೆ ಆರೋಪ; ಪ್ರಮುಖ‌ ಆರೋಪಿ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

Update: 2022-03-06 17:19 GMT

ಮಂಗಳೂರು, ಮಾ.6: ನಗರದ ರಥಬೀದಿಯ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ತೆರಳಿದ್ದ ಮತ್ತು ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹಿಬಾ ಶೇಖ್‌‌ಗೆ ದೈಹಿಕ ಹಲ್ಲೆ ನಡೆಸಿ, ಮಾನಸಿಕ ಹಿಂಸೆ ನೀಡಿ ಧಾರ್ಮಿಕವಾಗಿ ನಿಂದಿಸಿದ್ದಾರೆನ್ನಲಾದ ಘಟನೆಗೆ ಸಂಬಂಧಿಸಿ ಪ್ರಮುಖ ಆರೋಪಿ ಸಾಯಿ ಸಂದೇಶ್ ಹಾಗೂ ಇತರರ ಮೇಲೆ ಬಂದರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ನಗರದ ರಥಬೀದಿಯ ದಯಾನಂದ ಪೈ- ಸತೀಶ್ ಪೈ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳೂ ಆದ ಎಬಿವಿಪಿ ಕಾರ್ಯಕರ್ತರಾದ ನಿತೇಶ್ ಶೆಟ್ಟಿ(20), ಸಮಂತ್ ಆಳ್ವ(21), ಸನತ್ ಶೆಟ್ಟಿ(20), ಸಾಯಿ ಸಂದೇಶ್(20) ಹಾಗೂ ಇತರೆ 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.   

ಘಟನೆ ಕುರಿತು ಮಾ. 4 ರ ರಾತ್ರಿ ಹಲ್ಲೆಗೊಳಗಾದ ವಿದ್ಯಾರ್ಥಿನಿ ಹಿಬಾ ಶೇಖ್ ಬಂದರು ಠಾಣೆಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ನಾಲ್ವರು ಪ್ರಮುಖ ಆರೋಪಿಗಳಲ್ಲದೆ  ಇತರ 15 ಮಂದಿಯ ವಿರುದ್ಧ ಐಪಿಸಿ ಸೆಕ್ಷನ್ 323, 504ರಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕಾಲೇಜಿಗೆ ಹೋಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗಾಗಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಉಚಿತ ಆನ್‌ಲೈನ್ ಶಿಕ್ಷಣ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News