ಬೈಂದೂರು: ಸೋಮೇಶ್ವರ ಬೀಚ್ ನಲ್ಲಿ ಯುವಕ ಸಮುದ್ರಪಾಲು
Update: 2022-03-07 06:00 GMT
ಕುಂದಾಪುರ, ಮಾ.7: ಸ್ನೇಹಿತರ ಜೊತೆ ಸಮುದ್ರದಲ್ಲಿ ಗಾಳ ಹಾಕಿ ಮೀನು ಹಿಡಿಯುವ ವೇಳೆ ಆಕಸ್ಮಿಕವಾಗಿ ಯುವಕನೋರ್ವ ಸಮುದ್ರಪಾಲಾದ ಘಟನೆ ಬೈಂದೂರು ತಾಲೂಕಿನ ಸೋಮೇಶ್ವರ ಬಳಿ ಸೋಮವಾರ ಸಂಜೆ ನಡೆದಿರುವುದು ವರದಿಯಾಗಿದೆ.
ಮೃತರನ್ನು ಬೈಂದೂರು ಬಿಜೂರು ಸಮೀಪದ ಬವಳಾಡಿ ನಿವಾಸಿ ಶಶಿಧರ್ ದೇವಾಡಿಗ(23) ಎಂದು ಗುರುತಿಸಲಾಗಿದೆ.
ರವಿವಾರ ಸಂಜೆ ನಾಲ್ವರು ಗೆಳೆಯರೊಂದಿಗೆ ಮೀನು ಹಿಡಿಯಲು ಗಾಳಕ್ಕೆಂದು ತೆರಳಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿ ಶಶಿಧರ್ ಸಮುದ್ರಪಾಲಾದರೆನ್ನಲಾಗಿದೆ. ಜೊತೆಗಿದ್ದ ಯುವಕರು ಅವರ ರಕ್ಷಣೆಗೆ ಮುಂದಾದರೂ ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬೈಂದೂರು ಸಿಪಿಐ ಸಂತೋಷ್ ಕಾಯ್ಕಿಣಿ ಹಾಗೂ ಠಾಣೆಯವರು ಭೇಟಿ ನೀಡಿದ್ದಾರೆ.