×
Ad

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ

Update: 2022-03-07 20:34 IST

ಉಡುಪಿ, ಮಾ.7: ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರವು 2021ರ ಅಂತಾರಾಷ್ಟ್ರೀಯ ವಿಕೋಪ ಅಪಾಯ ತಗ್ಗಿಸುವಿಕೆ ದಿನಾಚರಣೆ ಅಂಗವಾಗಿ ವಿಕೋಪ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆ ಮತ್ತು ಉಪಯೋಗಗಳು ಕುರಿತು ನಡೆಸಿದ ರಾಜ್ಯ ಮಟ್ಟದ ಇಂಗ್ಲೀಷ್ ಭಾಷೆಯ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ನಯನ ದ್ವಿತೀಯ ಬಹುಮಾನವಾಗಿ 8,000 ರೂ. ನಗದು ಬಹುಮಾನವನ್ನು ಪಡೆದಿದ್ದಾರೆ.

ವಿಜೇತ ಅಭ್ಯರ್ಥಿಯು ಪ್ರಮಾಣ ಪತ್ರವನ್ನು ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಮಾರ್ಚ್ 20 ನಂತರ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9740768931 ಅನ್ನು ಸಂಪರ್ಕಿಸುವಂತೆ ಆಡಳಿತ ತರಬೇತಿ ಸಂಸ್ಥೆಯ ಮಹಾ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News