×
Ad

ಬಸ್ ಢಿಕ್ಕಿ: ಪಾದಚಾರಿ ಮೃತ್ಯು

Update: 2022-03-08 21:28 IST

ಉಡುಪಿ, ಮಾ.8: ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ಡಿವೈಡರ್ ಬಳಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಾ.7ರಂದು ಮಧ್ಯಾಹ್ನ ವೇಳೆ ನಗರದ ಲಯನ್ ಸರ್ಕಲ್ ಬಳಿಯ ಪೈ ಎಲೆಕ್ಟ್ರಾನಿಕ್ಸ್ ಎದುರು ನಡೆದಿದೆ.

ಮೃತರನ್ನು ಮಣಿಪಾಲದ ಮನೋಹರ್ ಶೆಟ್ಟಿ(82) ಎಂದು ಗುರುತಿಸಲಾಗಿದೆ. ಜೋಡುಕಟ್ಟೆ ಕಡೆಯಿಂದ ಉಡುಪಿ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಬಸ್, ಡಿವೈಡರ್ ಬಳಿ ನಿಂತಿದ್ದ ಮನೋಹರ್ ಶೆಟ್ಟಿಗೆ ಡಿಕ್ಕಿ ಹೊಡೆಯಿತ್ತೆ ನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News