×
Ad

'ಅಪರೇಷನ್ ಗಂಗಾ'ದಲ್ಲಿ ಮಂಗಳೂರು ಮೂಲದ ಪೈಲಟ್

Update: 2022-03-08 22:17 IST
ಕ್ಯಾ. ಮೈಕಲ್ ಸಲ್ದಾನ್ಹ

ಮಂಗಳೂರು, ಮಾ.8: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿಕೊಂಡವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ಕೇಂದ್ರ ಸರಕಾರದ ‘ಆಪರೇಷನ್ ಗಂಗಾ’ದಲ್ಲಿ ಮಂಗಳೂರು ಮೂಲದ ಪೈಲಟ್ ಕ್ಯಾ. ಮೈಕಲ್ ಸಲ್ದಾನ್ಹ ಕಾರ್ಯನಿರ್ವಹಿಸುತ್ತಿದ್ದಾರೆ.

ರೊಮೇನಿಯಾದ ಬುಕಾರೆಸ್ಟ್‌ನಿಂದ ಮುಂಬೈಗೆ 182 ವಿದ್ಯಾರ್ಥಿಗಳನ್ನು ಹೊತ್ತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಪೈಲಟ್ ಆಗಿ ಮೈಕಲ್ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೆ ಹಂಗೇರಿಯ ಬುಡಾಪೆಸ್ಟ್‌ನಿಂದ 185 ವಿದ್ಯಾರ್ಥಿಗಳನ್ನು ಕರೆ ತಂದಿದ್ದ ವಿಮಾನಕ್ಕೆ ಕುವೈತ್ ನಿಂದ ಮುಂಬೈವರೆಗೆ ಪೈಲಟ್ ಆಗಿದ್ದರು ಎಂದು ತಿಳಿದು ಬಂದಿದೆ.

‘ಬುಡಾಪೆಸ್ಟ್, ಬುಕಾರೆಸ್ಟ್ ಭಾಗಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೊದಲ ಬಾರಿಗೆ ತೆರಳಿದೆ. ದಟ್ಟ ಹಿಮ, ಬೆಟ್ಟ ಗುಡ್ಡ ಪ್ರದೇಶಗಳಿಂದ ಕೂಡಿದ ದೇಶದಲ್ಲಿ ವಿಮಾನ ಚಾಲನೆಯು ಸವಾಲಾಗಿ ಪರಿಣಮಿಸಿತ್ತು. ಆದಾಗ್ಯೂ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಲುಪಿಸಿದ ಬಗ್ಗೆ ಹೆಮ್ಮೆಯಿದೆ ಎಂದು ಮೈಕಲ್ ತಿಳಿಸಿದ್ದಾರೆ.

ಕಳೆದ 13 ವರ್ಷಗಳಿಂದ ಪೈಲಟ್ ಆಗಿರುವ ಮೈಕಲ್ ಸಲ್ದಾನ ಕೋವಿಡ್ 19-ಸೋಂಕಿನ ಸಂದರ್ಭ ಅಂದರೆ 2020ರ ಮೇ 7ರಂದು ‘ವಂದೇ ಮಾತರಂ’ ಕಾರ್ಯಾಚರಣೆಯಲ್ಲಿಯೂ ಪಾಲ್ಗೊಂಡು ದುಬೈನಿಂದ ಭಾರತೀಯರನ್ನು ಕರೆ ತಂದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News