ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್

Update: 2022-03-10 04:22 GMT

ಲಕ್ನೋ: 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಂತೆಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳಿದ್ದಾರೆ.

ಉತ್ತ್ತರಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ ಎನ್ನುವುದು ಆರಂಭಿಕ ಮುನ್ನಡೆ ತೋರಿಸುತ್ತದೆ.

"ಪರೀಕ್ಷೆ ಇನ್ನೂ ಪೂರ್ಣಗೊಂಡಿಲ್ಲ, ನಿರ್ಧಾರಗಳ ಸಮಯ ಬಂದಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಸಮಾಜವಾದಿ ಪಕ್ಷ ಹಾಗೂ ಮೈತ್ರಿಕೂಟದ ಪ್ರತಿಯೊಬ್ಬ ಕಾರ್ಯಕರ್ತರು, ಬೆಂಬಲಿಗರು, ನಾಯಕರು, ಪದಾಧಿಕಾರಿಗಳು ಮತ್ತು ಹಿತೈಷಿಗಳಿಗೆ ಹಗಲು ರಾತ್ರಿ ಎಚ್ಚರದಿಂದ ಮತ್ತು ಕ್ರಿಯಾಶೀಲರಾಗಿದ್ದಕ್ಕಾಗಿ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಯಾದವ್ ಟ್ವೀಟ್ ಮಾಡಿದ್ದಾರೆ.

ಉತ್ತರಪ್ರದೇಶದ  ಸ್ಟ್ರಾಂಗ್ ರೂಮ್‌ನಿಂದ ಎಲೆಕ್ಟ್ರಾನಿಕ್ ಮತಯಂತ್ರಗಳು ಅಥವಾ ಇವಿಎಂಗಳನ್ನು ತೆಗೆದುಕೊಂಡು ಹೋಗಲು ಪ್ರಯತ್ನಿಸಲಾಗಿದೆ ಎಂಬ ಆರೋಪವನ್ನು ಉಲ್ಲೇಖಿಸಿ ಯಾದವ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News