ಮಾ.14ರಂದು ಕರ್ನಾಟಕ ರಾಜ್ಯಪಾಲರು ಕಾರ್ಕಳಕ್ಕೆ
Update: 2022-03-12 20:44 IST
ಉಡುಪಿ : ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಮಾ.೧೪ರ ಸೋಮವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಸಂಜೆ 5.30ಕ್ಕೆ ಕಾರ್ಕಳದ ಗಾಂಧೀ ಮೈದಾನದಲ್ಲಿ ನಡೆಯುವ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 6.50ಕ್ಕೆ ಕಾರ್ಕಳದಿಂದ ಮಂಗಳೂರಿಗೆ ತೆರಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.