ಮಣಿಪುರ: ಬಿಜೆಪಿಗೆ ಬೆಂಬಲ ನೀಡಿದ 6 ಜೆಡಿಯು ಶಾಸಕರು

Update: 2022-03-13 06:32 GMT

ಇಂಫಾಲ: ಮಣಿಪುರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಸರಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ ಸಂಯುಕ್ತ ಜನತಾ ದಳದ ಆರು ಶಾಸಕರು ಬಿಜೆಪಿಗೆ ಬೆಂಬಲ ನೀಡಿದರು.

ಮಣಿಪುರದ ಜನರ ಹಿತದೃಷ್ಟಿಯಿಂದ ಸರಕಾರ ರಚನೆಯಲ್ಲಿ ಬಿಜೆಪಿಗೆ ಬೆಂಬಲ ನೀಡಲು ಜೆಡಿಯು ನಿರ್ಧರಿಸಿದೆ ಎಂದು ಜೆಡಿಯು ಶಾಸಕರು ಪತ್ರದಲ್ಲಿ ಬರೆದಿದ್ದಾರೆ.

"ಪಕ್ಷಕ್ಕೆ ಬಂದ ಜನಾದೇಶವನ್ನು ಗೌರವಿಸಲು ಹಾಗೂ  ಜನರ ಭರವಸೆ ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ಜೆಡಿಯು ಬಿಜೆಪಿಗೆ ಮನವಿ ಮಾಡಲು ಬಯಸುತ್ತದೆ" ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯ ವಿಧಾನಸಭೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ಜೆಡಿಯು ಖುಮುಚ್ಚಮ್ ಜೋಯ್ಕಿಸನ್ ಸಿಂಗ್ ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಿದೆ.

60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ.

ಈ ಮಧ್ಯೆ, ಮಣಿಪುರದಲ್ಲಿ ಕಾಂಗ್ರೆಸ್ ತನ್ನ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡಿದೆ.  2017 ರ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷದ ಸ್ಥಾನಮಾನವನ್ನು ಹೊಂದಿದ್ದ ಕಾಂಗ್ರೆಸ್ ಈಗ  ಕೇವಲ 5 ಸ್ಥಾನಗಳಿಗೆ ಇಳಿದಿದೆ. ಆದರೂ ಮೂರು ಬಾರಿ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಹಾಗೂ ಅವರ ಮಗ ಓ ಸುರ್ಜಾಕುಮಾರ್ ಕ್ರಮವಾಗಿ ತೌಬಲ್ ಮತ್ತು ಖಂಗಾಬೋ ಕ್ಷೇತ್ರಗಳಿಂದ ಜಯ ಗಳಿಸುವಲ್ಲಿ ಯಶಸ್ವಿಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News