ಗಡಿಪಾರು ಸುದ್ದಿ ಆಧಾರವಿಲ್ಲದ, ಅತಿರೇಕ: ನಟ ಚೇತನ್

Update: 2022-03-13 14:29 GMT

ಬೆಂಗಳೂರು, ಮಾ. 13: ನನ್ನನ್ನು ಗಡಿಪಾರು ಮಾಡಲಾಗುತ್ತಿದೆ ಎನ್ನುವ ವರದಿಗಳೆಲ್ಲಾವೂ ಅತಿರೇಕದ ಸುದ್ದಿಗಳು ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ತಿಳಿಸಿದ್ದಾರೆ.

ಗಡಿಪಾರು ವಿಚಾರ ಸಂಬಂಧ ರವಿವಾರ ಪ್ರತಿಕ್ರಿಯಿಸಿದ ಅವರು, ಸದ್ಯ ನನ್ನ ಗಡಿಪಾರಿನ ವರದಿಗಳೆಲ್ಲ ಆಧಾರವಿಲ್ಲದ ಅತಿರೇಕದ ಸುದ್ದಿಗಳು. ಈ ರೀತಿಯ ಸರಕಾರಿ ಬೆಂಬಲಿತ ದಾಳಿಗಳು ನಮ್ಮ ಸತ್ಯ ಮತ್ತು ಸಮಾನತೆಯ ಪರದ ಧ್ವನಿಗಳು ಹೆಚ್ಚಾಗುತ್ತಿರುವುದನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಇನ್ನೂ, ಬಂಧನ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಸಕ್ರಿಯವಾಗಿದ್ದೇನೆ. ರಾಜ್ಯ, ದೇಶ ಹಾಗೂ ವಿದೇಶಗಳಿಂದಲೂ ಗಟ್ಟಿ ಕಾರಣವಿರದ ನ್ಯಾಯಾಂಗ ಬಂಧನದ ಸಮಯದಲ್ಲಿ ನನ್ನ ಜೊತೆಗಿದ್ದು, ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದು ಚೇತನ್ ನುಡಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News