ಕೋಲಾರ : ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ; ಬಾರ್ ಕ್ಯಾಶಿಯರ್ ಹತ್ಯೆ
Update: 2022-03-16 05:43 GMT
ಕೋಲಾರ, ಮಾ.16 : ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದು ಕ್ಯಾಶಿಯರ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೋಲಾರ ನಗರದಲ್ಲಿ ನಡೆದಿದೆ.
ಕೋಲಾರ ನಗರದ ಟೇಕಲ್ ಸರ್ಕಲ್ ನಲ್ಲಿರುವ ಚಾಲುಕ್ಯ ಬಾರ್ ನಲ್ಲಿ ಘಟನೆ ನಡೆದಿದ್ದು, ಕ್ಯಾಶಿಯರ್ ಮೋಹನ್ ಕೊಲೆಯಾದವರು ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ನವೀದ್ ಬೇಗ್ ಹಾಗೂ ಆರೀಫ್ ಖಾನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಬಾರ್ ನಲ್ಲಿ ಮದ್ಯದ ಜೊತೆಗೆ ನೀರಿನ ಪಾಕೆಟ್ ಗಾಗಿ ಶುರುವಾದ ಜಗಳ, ನಂತರ ಕೊಲೆಯಲ್ಲಿ ಅಂತ್ಯವಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಕೋಲಾರ ಠಾಣೆ ಪೊಲೀಸರ ಭೇಟಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.