×
Ad

ಎ.1ರಿಂದ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸರಕಾರಿ ಆದೇಶ ಹೊರಡಿಸಲು ಸಿಎಂ ಬೊಮ್ಮಾಯಿ ಸೂಚನೆ

Update: 2022-03-18 00:01 IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಯವ್ಯಯದಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಅನುಷ್ಠಾನಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. 

2022-23ನೇ ಸಾಲಿನ ಆರ್ಥಿಕ ವರ್ಷ ಆರಂಭದ ಮೊದಲ ದಿನವಾಗಿರುವ ಎಪ್ರಿಲ್ 1 ರಿಂದಲೇ ಬಜೆಟ್ ಘೋಷಿತ ಯೋಜನೆಗಳ ಜಾರಿಗೆ ಸರಕಾರಿ ಆದೇಶಗಳನ್ನು ಹೊರಡಿಸುವಂತೆ ಸರಕಾರದ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಎಲ್ಲ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ, ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಉಲ್ಲೇಖಿಸಿ, ಈ ಕುರಿತು ಇಲಾಖೆಯಿಂದ ಯೋಜನೆಯ ರೂಪುರೇಷೆಗಳ ಕುರಿತು ಪ್ರಸ್ತಾವನೆ ಸಿದ್ಧಪಡಿಸಿ, ಆರ್ಥಿಕ ಇಲಾಖೆಯ ಆಯವ್ಯಯ ಸಲಹೆಯಂತೆ ಎಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ಸರಕಾರಿ ಆದೇಶಗಳನ್ನು ಹೊರಡಿಸುವಂತೆ ಸೂಚಿಸಿದ್ದಾರೆ.

ಅಲ್ಲದೆ, ಈ ಯೋಜನೆಗಳನ್ನು ಅತಿ ಶೀಘ್ರವಾಗಿ ಜಾರಿಗೊಳಿಸುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News