ವಿಪಕ್ಷ ನಾಯಕ ಸಿದ್ದರಾಮಯ್ಯಗೆ ‘ರಾಮಮನೋಹರ ಲೋಹಿಯಾ ಪ್ರಶಸ್ತಿ’
Update: 2022-03-18 19:40 IST
ಬೆಂಗಳೂರು, ಮಾ.18: ಭಾರತ ಯಾತ್ರಾ ಕೇಂದ್ರದ ವತಿಯಿಂದ ನೀಡುವ ‘ಡಾ. ರಾಮಮನೋಹರ ಲೋಹಿಯಾ ಪ್ರಶಸ್ತಿ’ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದ್ದು, ಮಾ.23ರಂದು ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ಪ್ರಾಧ್ಯಾಪಕ ಪ್ರೊ. ಆನಂದಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೇಖಕಿ ಡಾ. ವಸುಂಧರಾ ಭೂಪತಿ ಹಾಗೂ ಡಾ. ನಾಡಗೌಡ ಅವರು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.