ತಹಶೀಲ್ದಾರ್ ಗಳ ವರ್ಗಾವಣೆ ವಿಚಾರಕ್ಕೆ ಸಚಿವ ಅಶೋಕ್ -ಅಶ್ವತ್ಥ ನಾರಾಯಣ್ ಮಧ್ಯೆ ಜಟಾಪಟಿ
Update: 2022-03-19 06:33 GMT
ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಹಾಗೂ ಕೌಶಾಲ್ಯಾಭಿವೃದ್ಧಿ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಮಧ್ಯೆ ಜಟಾಪಟಿ ನಡೆದಿರುವ ಬಗ್ಗೆ ವರದಿಯಾಗಿದೆ.
ವಿಧಾನಸೌಧದಲ್ಲಿ ತಹಶೀಲ್ದಾರ್ ಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಧಿಕಾರಿಗಳ ಎದುರೇ ಇಬ್ಬರು ಸಚಿವರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ರಾಮನಗರ ಜಿಲ್ಲೆಯ 2 ತಹಶೀಲ್ದಾರ್ಗಳ ವರ್ಗಾವಣೆ ವಿಚಾರದಲ್ಲಿ ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅಶ್ವತ್ಥನಾರಾಯಣ್ ಸಚಿವ ಆರ್. ಅಶೋಕ್ ಗೆ ಪತ್ರ ಬರೆದಿದ್ದು, ಈ ಸಂಬಂಧ ಆರ್. ಅಶೋಕ್ ವರ್ಗಾವಣೆ ಆದೇಶ ಹೊರಡಿಸಿರಲಿಲ್ಲ ಎನ್ನಲಾಗಿದೆ.
ಈ ವಿಚಾರವನ್ನು ಗುರುವಾರ ವಿಧಾನಸೌಧದಲ್ಲಿ ಸಚಿವ ಅಶ್ವತ್ಥನಾರಾಯಣ್, ಅಶೋಕ್ ಅವರಲ್ಲಿ ಪ್ರಶ್ನಿಸಿದಾಗ ಇಬ್ಬರ ನಡುವೆ ಕೆಲಕಾಲ ಏಕವಚನದಲ್ಲೇ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದೆ.