×
Ad

ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ದೇಹ ವೈದ್ಯಕೀಯ ಕಾಲೇಜಿಗೆ ದಾನ: ಕುಟುಂಬಸ್ಥರ ತೀರ್ಮಾನ

Update: 2022-03-19 11:59 IST
ನವೀನ್ ಗ್ಯಾನಗೌಡರ್

ಹಾವೇರಿ: ಉಕ್ರೇನ್‌ನಲ್ಲಿ ಮೃತಪಟ್ಟ ಹಾವೇರಿ ಮೂಲದ  ವಿದ್ಯಾರ್ಥಿ ನವೀನ್ ಗ್ಯಾನಗೌಡರ್  ಅವರ ಮೃತದೇಹವನ್ನು ದಾವಣಗೆರೆಯ ಎಸ್‌.ಎಸ್‌.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ನವೀನ್ ತಂದೆ ಶೇಖರಪ್ಪ , ಮೃತದೇಹವನ್ನು ದಾವಣಗೆರೆಯ ಎಸ್.ಎಸ್ ಮೆಡಿಕಲ್ ಕಾಲೇಜಿಗೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸಹಾಯವಾಗಲು ನೀಡುವುದಾಗಿ ಹೇಳಿದ್ದಾರೆ.

ಇನ್ನು  ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್ ಮೃತದೇಹ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ತಲುಪಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ:  ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್‌ ಪಾರ್ಥಿವ ಶರೀರ ಮಾ.21ಕ್ಕೆ ಬೆಂಗಳೂರಿಗೆ: ಮುಖ್ಯಮಂತ್ರಿ ಬೊಮ್ಮಾಯಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News