ರಾಜೇಸಾಬ ಹುಬ್ಬಳ್ಳಿ
Update: 2022-03-20 05:44 GMT
ಮುಂಡಗೋಡ, ಮಾ.20: ಅರಣ್ಯ ಇಲಾಖೆಯ ಕ್ಷೇಮಾಭಿವೃದ್ಧಿ ನೌಕರ ರಾಜೇಸಾಬ ಹುಬ್ಬಳ್ಳಿ(56) ಶನಿವಾರ ರಾತ್ರಿ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಮೃತರು ಕಾತೂರ ಗ್ರಾಮದ ನಿವಾಸಿಯಾಗಿದ್ದು, ಕಾತೂರ ವಲಯದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ರಾಜೇಸಾಬ ನಿಧನಕ್ಕೆ ಕಾತೂರ ವಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಶೋಕ ವ್ಯಕ್ತಪಡಿಸಿದ್ದಾರೆ.