ಮೈಸೂರು: ಸಾಲಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ

Update: 2022-03-22 18:57 GMT
ಸಾಂದರ್ಭಿಕ ಚಿತ್ರ

ಮೈಸೂರು,ಮಾ.22:  ಸಾಲಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

 ಬೆಟ್ಟದಪುರ ಸಮೀಪದ ಚನ್ನಕೇಶವಪುರ ನಿವಾಸಿ ಗಣೇಶಾಚಾರಿ (58)ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೇಸಾಯ ಮಾಡಲು ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ 3.5ಲಕ್ಷ ರೂ. ಚಿನ್ನದ ಮೇಲೆ 90 ಸಾವಿರ ರೂ. ಸಂಬಂಧಿಕರು ಸ್ನೇಹಿತರ ಬಳಿ 3ಲಕ್ಷ ರೂ.ಕೈಸಾಲ ಮಾಡಿದ್ದರು. ಸಾಲ ತೀರಿಸಲಾಗದೇ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಮತ್ತೊಂದು ಪ್ರಕರಣದಲ್ಲಿ ಹುಣಸೂರು ತಾಲೂಕು ಗಾವಡಗೆರೆ ಗ್ರಾಮದ ಪ್ರಗತಿಪರ ರೈತ ದೀಪಕ್(40)ಸಾಲಬಾಧೇ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಮಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News