×
Ad

ರಿಕ್ಷಾ ಚಾಲಕ ಆತ್ಮಹತ್ಯೆ

Update: 2022-03-23 21:22 IST

ಉಡುಪಿ : ಆರ್ಥಿಕ ಸಂಕಷ್ಟದಿಂದ ರಿಕ್ಷಾ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕಿಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ಕುಕ್ಕಿಕಟ್ಟೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ನಿವಾಸಿ ಸುನಿಲ್ ಕೆ.(28) ಎಂದು ಗುರುತಿಸಲಾಗಿದೆ. ಆರ್ಥಿಕ  ಸಂಕಷ್ಟ ದಿಂದ ಜೀವನದಲ್ಲಿ ಬೇಸತ್ತ ಇವರು, ಮಾ.15ರಂದು ಮನೆಯಲ್ಲಿ ಇಲಿ ಪಾಷಾಣ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥಗೊಂಡ ಇವರು,  ಅಜ್ಜರಕಾಡು ಜಿಲ್ಲಾಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾ.22ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News