×
Ad

ಅಕ್ರಮ ಮರಳುಗಾರಿಕೆ ಆರೋಪ : ಮೂರು ಟಿಪ್ಪರ್ ವಶ

Update: 2022-03-27 22:12 IST

ಕುಂದಾಪುರ : ಕಳಿನಜೆಡ್ಡು ಹಾಗೂ ರಟ್ಟಾಡಿಯ ಹೆಮಣ್ಣು ಪರಿಸರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಆರೋಪದಲ್ಲಿ ಮಾ.26ರಂದು ದಾಳಿ ನಡೆಸಿದ ಅಧಿಕಾರಿಗಳ ತಂಡ ಮೂರು ಮರಳು ತುಂಬಿದ ಟಿಪ್ಪರ್‌ಗಳನ್ನು ವಶಪಡಿಸಿಕೊಂಡಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು. ಮಾರ್ಗದರ್ಶನದಲ್ಲಿ ದಾಳಿ ನಡೆಸಿದ  ಗಣಿ ಇಲಾಖೆಯ  ಭೂವಿಜ್ಞಾನಿ ಸಂಧ್ಯಾ, ಮರಳು ತುಂಬಿದ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಮುಂದಿನ ಕ್ರಮಕ್ಕಾಗಿ ಇವುಗಳನ್ನು ಅಮಾಸೆಬೈಲು ಪೊಲೀಸ್ ಠಾಣಾ ಸುಪರ್ದಿಯಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News