ಕುಂದಾಪುರ: ಕೆರಾಡಿಯಲ್ಲಿ ಬಾವಿಗೆ ಬಿದ್ದ ಚಿರತೆಯ ರಕ್ಷಣೆ

Update: 2022-03-28 07:26 GMT

ಕುಂದಾಪುರ: ವಲಯ ಅರಣ್ಯ ವ್ಯಾಪ್ತಿಗೊಳಪಡುವ ಕೆರಾಡಿ ಎಂಬಲ್ಲಿ ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಲಾಗಿದೆ.

ಕೆರಾಡಿಯ ಸುಕುಮಾರ ಶೆಟ್ಟಿ ಎನ್ನುವರ ಮನೆಯ ಆವರಣವಿಲ್ಲದ ಬಾವಿಗೆ ಚಿರತೆ ಬಿದ್ದಿರುವುದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ತಕ್ಷಣವೇ ಸ್ಥಳಕ್ಕೆ ತೆರಳಿದ ಅವರು ಬಾವಿಗೆ ಹಗ್ಗ ಕಟ್ಟಿದ ಬೋನು ಬಿಟ್ಟು ಚಿರತೆ ಪ್ರವೇಶಿಸುವಂತೆ ಮಾಡಿ ನಂತರ ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

ಮೂರೂವರೆ ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದ್ದು, ಆಹಾರ ಹುಡುಕಿಕೊಂಡು ಬಂದು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.

ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆಯವರು‌ ಹಾಗೂ ಸ್ಥಳೀಯರು ಕಾರ್ಯಾಚರಣೆಗೆ ಸಹಕರಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News