×
Ad

ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ

Update: 2022-03-29 19:27 IST

ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರ ಇದೇ ಎ.೮ರಿಂದ ೧೩ರ ವರೆಗೆ ಧಾರವಾಡ ಕರ್ನಾಟಕ ಕಾಲೇಜು ಆವರಣದಲ್ಲಿ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವನ್ನು ಏರ್ಪಡಿಸಿದೆ. ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಕನ್ನಡ ಪ್ರಕಾಶಕರು ಹಾಗೂ ಮಾರಾಟಗಾರರಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಎ.೬ ಕೊನೆಯ ದಿನ.  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ದೂ.ಸಂಖ್ಯೆ: ೦೮೦-೨೨೪೮೪೫೧೬/೨೨೧೦೭೭೦೪ ಅಥವಾ ಪ್ರಾಧಿಕಾರದ ವೆಬ್‌ಸೈಟ್ - www.kannadapustakapradhikara.com- ಅಥವಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಯನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News