ಪಶು ಸಂಗೋಪನಾ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ತನಿಖೆಯಾಗಲಿದೆ: ಸಚಿವ ಪ್ರಭು ಚವ್ಹಾಣ್

Update: 2022-03-30 14:57 GMT

ಬೆಂಗಳೂರು, ಮಾ.30: ಪಶು ಸಂಗೋಪನಾ ಇಲಾಖೆಯಲ್ಲಿ ಔಷಧಿ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆಗೆ ಒಳಪಡಿಸುವುದಾಗಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

ಬುಧವಾರ ವಿಧಾನ ಪರಿಷತ್ತಿನ ಕಲಾಪದಲ್ಲಿ ಅವರು, ಆಯುಕ್ತರ ಮಟ್ಟದಲ್ಲಿ ರಾಜ್ಯಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಇ-ಟೆಂಡರ್ ಮೂಲಕ ಔಷಧಿ ಖರೀದಿ ಮಾಡಲಾಗುತ್ತಿದೆ. ತಾಂತ್ರಿಕ ಸಮಿತಿ ಶಿಫಾರಸ್ಸು ಮೇರೆಗೆ ಅಗತ್ಯ ಇರುವ ಔಷಧಿಗಳನ್ನು ಖರೀದಿಸಲಾಗುತ್ತಿದೆ. ಎಲ್ 1 ಇರುವವರಿಗೆ ಟೆಂಡರ್ ನೀಡುತ್ತಿದ್ದೇವೆ. ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News