×
Ad

ತಮಿಳುನಾಡಿನ ವನ್ನಿಯಾರ್ ಸಮುದಾಯಕ್ಕೆ ಉದ್ಯೋಗ ಮೀಸಲಾತಿ ರದ್ದುಪಡಿಸಿದ ಸುಪ್ರೀಂಕೋರ್ಟ್

Update: 2022-03-31 11:27 IST

ಹೊಸದಿಲ್ಲಿ: ತಮಿಳುನಾಡಿನ ವನ್ನಿಯಾರ್ ಸಮುದಾಯಕ್ಕೆ ಸರಕಾರಿ ಉದ್ಯೋಗ ಹಾಗೂ  ಶಿಕ್ಷಣ ಸಂಸ್ಥೆಗಳಲ್ಲಿ ನೀಡಲಾಗಿದ್ದ ಶೇ.10.5 ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ ಎಂದು NDTV ವರದಿ ಮಾಡಿದೆ.

ಮೀಸಲಾತಿಯನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಹಾಗೂ ಬಿ.ಆರ್.ಗವಾಯಿ ಅವರನ್ನೊಳಗೊಂಡ ಪೀಠವು, “ವನ್ನಿಯಾಕುಲ ಕ್ಷತ್ರಿಯರನ್ನು ಒಂದೇ ಗುಂಪಿಗೆ ವರ್ಗೀಕರಿಸಲು ಯಾವುದೇ ಗಣನೀಯ ಆಧಾರವಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ ಮತ್ತು ಅತ್ಯಂತ ಹಿಂದುಳಿದ ಸಮುದಾಯ(ಎಂಬಿಸಿ) ಗುಂಪುಗಳೊಳಗಿನ ಉಳಿದ 115 ಸಮುದಾಯಗಳಿಗಿಂತ ವಿಭಿನ್ನವಾಗಿ ಪರಿಗಣಿಸಬೇಕು.  2021 ಕಾಯಿದೆಯು ಸಂವಿಧಾನದ 14, 15 ಮತ್ತು 16 ನೇ ವಿಧಿಗಳ ಉಲ್ಲಂಘನೆಯಾಗಿದೆ. ಹೀಗಾಗಿ ನಾವು ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿಯುತ್ತೇವೆ'' ಎಂದು ಪೀಠ ಹೇಳಿದೆ.

ತಮಿಳುನಾಡು ವಿಧಾನಸಭೆಯಲ್ಲಿ ಕಳೆದ ವರ್ಷ ಫೆಬ್ರವರಿಯಲ್ಲಿ ಆಗಿನ ಆಡಳಿತಾರೂಢ ಎಐಎಡಿಎಂಕೆ-ಪೈಲಟ್ ಮಸೂದೆಯನ್ನು ಅಂಗೀಕರಿಸಿತ್ತು. ವನ್ನಿಯಾರ್‌ಗಳಿಗೆ 10.5 ಶೇಕಡಾ ಆಂತರಿಕ ಮೀಸಲಾತಿಯನ್ನು ಒದಗಿಸಿತು.  ಅದರ ಅನುಷ್ಠಾನಕ್ಕಾಗಿ ಈಗ ಅಧಿಕಾರದಲ್ಲಿರುವ ಡಿಎಂಕೆ ಸರಕಾರವು ಜುಲೈ 2021 ರಲ್ಲಿ ಆದೇಶವನ್ನು ಹೊರಡಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News