ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Update: 2022-03-31 14:44 GMT

ಬೆಂಗಳೂರು, ಮಾ.31: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ನಗರದ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಅಬ್ದುಲ್ ವಾಸೀಂ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತನ ಮೇಲಿನ ಆರೋಪ ರುಜುವಾತಾದ ಹಿನ್ನೆಲೆ ನಗರದ 60ನೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿದ್ಯಾಧರ್ ಶಿರಹಟ್ಟಿ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

ಬೆಂಗಳೂರಿನ ಆಡುಗೋಡಿ ಸಮೀಪದ ಲಕ್ಷಣರಾವ್ ನಗರ ನಿವಾಸಿಗಳಾದ ಪರಮೇಶ್(39) ಹಾಗೂ ಆರೋಪಿ ಅಬ್ದುಲ್ ವಾಸೀಂ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳವಿತ್ತು. ಇದೇ ವಿಚಾರವಾಗಿ 2020ರ ಜುಲೈ 20ರಂದು ಅಬ್ದುಲ್ ವಾಸೀಂ ಬೀಡಿ ಕೇಳುವ ನೆಪದಲ್ಲಿ ಪರಮೇಶ್ ಮನೆ ಬಳಿ ಬಂದು ಜಗಳ ತೆಗೆದಿದ್ದ. ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಜಗಳವಾದಾಗ ಮನೆಯಿಂದ ಹೊರಗೆಳೆದು ತಂದು ಸ್ಕ್ರೂಡ್ರೈವರ್‍ನಿಂದ ಪರಮೇಶ್ ಕಿವಿ ಬಳಿ ಹಾಗೂ ಕುತ್ತಿಗೆಗೆ ಇರಿದಿದ್ದ. ಘಟನೆಯಲ್ಲಿ ಪರಮೇಶ್ ಸಾವನ್ನಪ್ಪಿದ ಕುರಿತು ಆಡುಗೋಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News