ಜಟ್ಕಾ ವಿವಾದದ ಕುರಿತು ನಟ ಚೇತನ್ ಅಹಿಂಸಾ ಪ್ರತಿಕ್ರಿಯಿಸಿದ್ದು ಹೀಗೆ...

Update: 2022-04-02 13:55 GMT

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸಂಘಪರಿವಾರದ ಕಾರ್ಯಕರ್ತರು ಹಿಂದೂಯೇತರರ ಮಾಂಸ ಮಾರಾಟ ವಿಚಾರದಲ್ಲಿ ವಿವಾದ ಸೃಷ್ಟಿಸಿರುವ ಬಗ್ಗೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯಿಸಿದ್ದಾರೆ. 

ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಅವರು, ''ಕರ್ನಾಟಕದಲ್ಲಿನ ಹಿಂದುತ್ವ ಸಂಘಟನೆಗಳು 'ಹಲಾಲ್' - ಕಟ್ ಮಾಂಸ ಮಾರಾಟಗಾರರನ್ನು ನಿಷೇಧಿಸಲು, 'ಜಟ್ಕಾ' - ಕಟ್ ಮಾಂಸವನ್ನು ಒತ್ತಾಯಿಸಿ ದಂಗೆ ಎಬ್ಬಿಸುತ್ತಿದ್ದಾರೆ'' ಎಂದು ಹೇಳಿದ್ದಾರೆ. 

''ನಾವು ಕೊಲ್ಲುವ ಮಾರ್ಗಗಳ ಬಗ್ಗೆ ಹೋರಾಡುವ ಬದಲು, ಹೆಚ್ಚಿನ ಜೀವಗಳನ್ನು ರಕ್ಷಿಸುವ ಕೆಲಸ ಮಾಡಬೇಕಲ್ಲವೇ?  ಸದ್ಯದ ಪರಿಸ್ಥಿತಿಯಲ್ಲಿ ಬುದ್ಧನ 'ಅಹಿಂಸೆಯ' ಅಗತ್ಯವಿದೆಯೇ ಹೊರತು, ಕೋಮು ದ್ವೇಷದ ಅಗತ್ಯವಿಲ್ಲ'' ಎಂದು ನಟ ಚೇತನ್ ಸಲಹೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News