​ಜೋಕಟ್ಟೆ: ಗಾಂಜಾ ಸೇವಿಸಿದ್ದ ಆರೋಪದಲ್ಲಿ ಯುವಕ ಸೆರೆ

Update: 2022-04-02 14:06 GMT

ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆಗೈದಿದ್ದ ಆರೋಪಿಯನ್ನು ಪಣಂಬೂರು ಪೊಲೀಸರು ಶನಿವಾರ ಬೆಳಗ್ಗೆ ಜೋಕಟ್ಟೆ ರೈಲ್ವೆ ಟ್ರಾಕ್ ಬಳಿ ಬಂಧಿಸಿದ್ದಾರೆ.

ಶನಿವಾರ ಬೆಳಿಗ್ಗೆ ೯:೩೦ಕ್ಕೆ ಎಸ್ಸೈ ಉಮೇಶ್ ಕುಮಾರ್, ಹೆಚ್‌ಸಿ ಚಂದ್ರಹಾಸರೊಂದಿಗೆ ಗಸ್ತು ಕರ್ತವ್ಯದಲ್ಲಿದ್ದ ವೇಳೆ ಜೋಕಟ್ಟೆ ರೈಲ್ವೇ ಟ್ರಾಕ್ ಬಳಿ ಮಾದಕ ವಸ್ತು ಸೇವನೆಯ ನಶೆಯಲ್ಲಿದ್ದಂತೆ ಕಂಡುಬಂದಿದ್ದ ಕೈಕಂಬ ಸಮೀಪದ ಸೂರಲ್ಪಾಡಿಯ  ಸಫ್ವಾನ್ (19) ಎಂಬಾತನನ್ನು ವಶಕ್ಕೆ ಪಡೆದು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಡ ಪಟ್ಟಿದೆ. ಅದರಂತೆ ಎನ್‌ಡಿಪಿಎಸ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News