‘ಸಂಘಟನೆಗಳ ಪರವಾಗಿ ನಾವು ಇದ್ದೇವೆ': ಜಟ್ಕಾ ವಿವಾದವನ್ನು ಸಮರ್ಥಿಸಿದ ಸಚಿವೆ ಶಶಿಕಲಾ ಜೊಲ್ಲೆ

Update: 2022-04-02 15:16 GMT
ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸಂಘಪರಿವಾರದ ಕಾರ್ಯಕರ್ತರು ಹಿಂದೂಯೇತರರ ಮಾಂಸ ಮಾರಾಟ ವಿಚಾರದಲ್ಲಿ ವಿವಾದ ಸೃಷ್ಟಿಸಿರುವ ಬಗ್ಗೆ ರಾಜ್ಯ ಮುಜರಾಯಿ, ಹಜ್ ಮತ್ತು ವಕ್ಫ್‌ ಸಚಿವರಾಗಿರುವ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದು,   'ಹಿಂದೂ ಸಂಘಟನೆಗಳ ಪರವಾಗಿ ನಾವು ಇದ್ದೇವೆ’ ಎಂದು ಸಮರ್ಥಿಸಿಕೊಂಡಿದ್ದಾರೆ. 

ಈ ಸಂಬಂದ ಶನಿವಾರ ಸುದ್ದಿಗಾರರೊಂದಿಗೆ ಮಾತಾಡಿದ ಸಚಿವೆ,  “ಈ ಸಂಘಟನೆಗಳು ಮಾಡುತ್ತಿರುವ ರೀತಿಯಲ್ಲಿ ಜಟ್ಕಾ ಕಟ್‌ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿಸುವ ಅಗತ್ಯವಿದೆ. ಯಾಕೆಂದರೆ ಅದು ಬೇರೆ ದೇವರಿಗೆ ಅರ್ಪಿಸುವುದರಿಂದ ಸಮಸ್ಯೆ ಉದ್ಭವಿಸುತ್ತದೆ. ಈ ಸಂಘಟನೆಗಳ ಪರವಾಗಿ ನಾವು ಇದ್ದೇವೆ” ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News