ಉದ್ಯಮಗಳನ್ನು ಬೆಂಗಳೂರಿನಿಂದ ಹೈದರಾಬಾದ್ ಗೆ ಆಹ್ವಾನಿಸಿದ ತೆಲಂಗಾಣ ಸಚಿವ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Update: 2022-04-05 18:33 GMT

ಬೆಂಗಳೂರು: 'ನಗರದಿಂದ ಉದ್ಯಮಿಗಳು ಗಂಟುಮೂಟೆ ಕಟ್ಟಿಕೊಂಡು ಹೈದರಾಬಾದ್​ಗೆ ಬರಬೇಕು' ಎಂದು ತೆಲಂಗಾಣ ಸಚಿವರೊಬ್ಬರ ಟ್ವೀಟ್ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ.

ದೇಶ ಮಾತ್ರವಲ್ಲ ಇಡೀ ಜಗತ್ತಿನ ಜನ ಬೆಂಗಳೂರಿಗೆ ಬರುತ್ತಿದ್ದಾರೆ. ಅತಿ ಹೆಚ್ಚು ಸ್ಟಾರ್ಟ್‍ಅಪ್‍ಗಳು ಬೆಂಗಳೂರಿನಲ್ಲಿವೆ. ಅತಿ ಹೆಚ್ಚು ವಿದೇಶಿ ಹೂಡಿಕೆ ಬೆಂಗಳೂರಿನಲ್ಲಿದೆ. ತೆಲಂಗಾಣ ಸಚಿವ ಕೆ.ಟಿ.ರಾಮರಾವ್ ಟ್ವೀಟ್  ಹಾಸ್ಯಾಸ್ಪದವಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಮಾಡುವ ಹಕ್ಕು ಜೆಡಿಎಸ್‍ಗೆ ಇದೆ. ಆದರೆ, ಸರಕಾರ ಆರೆಸ್ಸೆಸ್ ರಿಮೋಟ್ ಕಂಟ್ರೋಲ್ ಎನ್ನುವ ಆಧಾರರಹಿತ ಆರೋಪಗಳ ಬಗ್ಗೆ ನಾನು ಉತ್ತರ ಕೊಡುವುದಿಲ್ಲ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News