×
Ad

ಧ್ವನಿವರ್ಧಕ ಬಳಕೆ ವಿಚಾರ; ಕೋರ್ಟ್ ಆದೇಶವನ್ನ ಯಥಾವತ್ತಾಗಿ ಪಾಲಿಸಿ: ಡಿಜಿಪಿ ಪ್ರವೀಣ್ ಸೂದ್

Update: 2022-04-06 12:21 IST

ಬೆಂಗಳೂರು : ರಾಜ್ಯದಲ್ಲಿ ಮಸೀದಿ ಹಾಗೂ ಇತರ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಕೆ ವಿಚಾರವಾಗಿ ಡಿಜಿಪಿ ಪ್ರವೀಣ್ ಸೂದ್​ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದ ಎಲ್ಲಾ ಕಮಿಷನರ್​, ಐಜಿಪಿ ಹಾಗೂ ಎಸ್​ಪಿಗಳಿಗೆ ಸುತ್ತೋಲೆ ಕಳಿಸಿರುವ ಪ್ರವೀಣ್ ಸೂದ್, ಹೈ ಕೋರ್ಟ್ ಆದೇಶವನ್ನ ಯಥಾವತ್ತಾಗಿ ಪಾಲಿಸಿ.​ ಶಬ್ದಮಾಲಿನ್ಯ ಉಂಟು ಮಾಡುತ್ತಿರುವವರ ಮೇಲೆ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಧಾರ್ಮಿಕ ಕೇಂದ್ರಗಳು, ಪಬ್​, ನೈಟ್ ಕ್ಲಬ್, ಕಾರ್ಯಕ್ರಮಗಳ ಮೇಲೆ ನಿಗಾ ವಹಿಸಿ, ಶಬ್ಧ ಮಾಲಿನ್ಯ ಉಂಟು ಮಾಡುತ್ತಿದ್ದರೆ, ಮಾಲಿನ್ಯ ನಿಯಂತ್ರಣ ಮಂಡಳಿ ಕಾಯ್ದೆ 2000ದಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News