ಕೋಮು ತಂಟೆಕೋರ ಸಿ.ಟಿ.ರವಿ ವಿರುದ್ಧ ಮೊದಲು ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ
ಬೆಂಗಳೂರು, ಎ. 6: ‘ಮೇಕೆದಾಟು ಅಣೆಕಟ್ಟು ಕುಡಿಯುವ ನೀರಿನ ಯೋಜನೆ ವಿಷಯದಲ್ಲಿ ಮೌನವಾಗಿದ್ದು ತಮಿಳುನಾಡಿಗೆ ನೆರವಾಗುವ, ಕನ್ನಡ ಭಾಷೆಯನ್ನು ಹತ್ತಿಕ್ಕಿ ಹಿಂದಿ ಭಾಷೆ ಹೇರುವ ಕೇಂದ್ರ ಸರಕಾರದ ದಮನಕಾರಿ ನಿಲುವನ್ನು ಬೆಂಬಲಿಸುವ ಸಿ.ಟಿ.ರವಿ ಅವರ ಒಂದು ಕಾಲು ಹೇಗೂ ರಾಜ್ಯದ ಹೊರಗಿದೆ, ಇನ್ನೊಂದು ಕಾಲನ್ನೂ ಎತ್ತಿ ಹೊರಗೆ ಹೋದರೆ ರಾಜ್ಯಕ್ಕೆ ಕ್ಷೇಮ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಗೋರಿಪಾಳ್ಯದ ಕೊಲೆ ಪ್ರಕರಣದ ಬಗ್ಗೆ ಈಗಾಗಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹೇಳಿಕೆ ನೀಡಿ, ಇದು ವೈಯಕ್ತಿಕ ಘರ್ಷಣೆಯಿಂದ ನಡೆದ ಹತ್ಯೆ, ಭಾಷೆ ವಿಚಾರಕ್ಕೆ ಅಲ್ಲ ಎಂದು ಹೇಳಿದ್ದಾರೆ. ಕೋಮುದ್ವೇಷ ಕಕ್ಕುವುದು ಮತ್ತು ಎಲ್ಲದಕ್ಕೂ ನನ್ನ ಹೆಸರು ಎಳೆದು ತರುವುದು ಸಿ.ಟಿ.ರವಿ ಅವರಿಗೆ ಮಾನಸಿಕ ರೋಗವಾಗಿ ಬಿಟ್ಟಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಬೈಕ್ ಢಿಕ್ಕಿಗೆ ಸಂಬಂಧಿಸಿದ ಗಲಾಟೆಯಲ್ಲಿ ನಡೆದ ಕೊಲೆಯಲ್ಲೂ ಭಾಷೆ, ಧರ್ಮ ಎಳೆದುತಂದು ಸಮಾಜಕ್ಕೆ ಬೆಂಕಿ ಹಚ್ಚುವ ಸಿ.ಟಿ.ರವಿಯವರಂತಹ ಕೋಮು ತಂಟೆಕೋರರ ವಿರುದ್ಧ ಪೊಲೀಸರು ಮೊದಲು ಕ್ರಮ ಕೈಗೊಳ್ಳಬೇಕು' ಎಂದು ಸಿದ್ದರಾಮಯ್ಯ, ಸಿ.ಟಿ.ರವಿ ವಿರುದ್ಧ ಕಿಡಿಕಾರಿದ್ದಾರೆ.
ಬೈಕ್ ಡಿಕ್ಕಿಗೆ ಸಂಬಂಧಿಸಿದ ಗಲಾಟೆಯಲ್ಲಿ ನಡೆದ ಕೊಲೆಯಲ್ಲೂ ಭಾಷೆ, ಧರ್ಮ ಎಳೆದುತಂದು ಸಮಾಜಕ್ಕೆ ಬೆಂಕಿ ಹಚ್ಚುವ @CTRavi_BJP ಯಂಥ ಕೋಮು ತಂಟೆಕೋರರ ವಿರುದ್ಧ ಪೊಲೀಸರು ಮೊದಲು ಕ್ರಮಕೈಗೊಳ್ಳಬೇಕು. 1/3#ArrestCTRavi pic.twitter.com/Fx0IYCyvEy
— Siddaramaiah (@siddaramaiah) April 6, 2022