10 ಜಿಲ್ಲೆಗಳ ವಕ್ಫ್ ಸಲಹಾ ಸಮಿತಿ ರಚನೆಗೆ ತಡೆ

Update: 2022-04-11 13:28 GMT

ಬೆಂಗಳೂರು, ಎ.10: ದಕ್ಷಿಣ ಕನ್ನಡ, ಬೆಂಗಳೂರು ದಕ್ಷಿಣ, ರಾಮನಗರ ಸೇರಿದಂತೆ 10 ಜಿಲ್ಲೆಗಳಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ರಚನೆಗೆ ತಡೆ ನೀಡಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸುತ್ತೋಲೆ ಹೊರಡಿಸಿದ್ದಾರೆ.

ಸಮಿತಿ ರಚನೆ ಸಂಬಂಧಿಸಿದತೆ ಎ.6ರಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಹೊರಡಿಸಿರುವ ಆದೇಶದಲ್ಲಿ ಕ್ರಿಯಾಲೋಪ ಹಾಗೂ ಕೆಲ ದೂರುಗಳು ಕೇಳಿಬಂದಿರುವ ಕಾರಣದಿಂದಾಗಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ರಾಮನಗರ, ಚಿಕ್ಕೋಡಿ, ತುಮಕೂರು, ಚಿಕ್ಕಬಳ್ಳಾಪುರ,ಕೊಪ್ಪಳ ಹಾಗೂ ಬೀದರ್ ಜಿಲ್ಲೆಗಳಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ರಚನೆಗೆ ಮುಂದಿನ ಆದೇಶವರೆಗೂ ತಡೆ ನೀಡುವಂತೆ ರಾಜ್ಯ ವಕ್ಫ್ ಮಂಡಳಿ ಸಿಇಒಗೆ ಸೂಚಿಸಲಾಗಿದೆ ಎಂದು ಸಚಿವರು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News