ಜಾನುವಾರು ಕಳವು ಪ್ರಕರಣ; ಆರೋಪಿ ಸೆರೆ

Update: 2022-04-11 15:37 GMT

ಮಂಗಳೂರು : ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಪಿಲ ಪಾರ್ಕ್ ಬಳಿಯ ಜಾನುವಾರು ಗೋಶಾಲೆಯಲ್ಲಿ ಮೇಯಲು ಬಿಟ್ಟಿದ್ದ ಜಾನುವಾರು ಕಳವುಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಜೋಕಟ್ಟೆಯ ರಾಝಿಕ್ (19) ಎಂದು ಗುರುತಿಸಲಾಗಿದೆ.

ಎ.7ರಂದು ಮೇಯಲು ಬಿಟ್ಟಿದ್ದ ಜಾನುವಾರುಗಳನ್ನು ಕಳವುಗೈದಿರುವ ಬಗ್ಗೆ ಪ್ರಕಾಶ್ ಶೆಟ್ಟಿ ಮರವೂರು ಬಜ್ಪೆ ಠಾಣೆಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದು, ಕೃತ್ಯದಲ್ಲಿ ಭಾಗಿಯಾದ ಇತರರ ಶೋಧಕಾರ್ಯ ಮುಂದುವರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News