ಸಾರಿಗೆ ನೌಕರರ ಅಂತರ ನಿಗಮ ವರ್ಗಾವಣೆ: ಎ.15ರಿಂದ ಪ್ರಕ್ರಿಯೆ ಪ್ರಾರಂಭ

Update: 2022-04-13 15:14 GMT

ಬೆಂಗಳೂರು, ಎ.13: ರಾಜ್ಯ ಸರಕಾರದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ- 1ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ನೀಡಲಾಗಿದೆ.

ಈಗಾಗಲೇ ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, 2022ನೆ ಸಾಲಿನ ವರ್ಗಾವಣೆ ಪ್ರಕ್ರಿಯೆಯು ಎ.15ರ ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಲಿದೆ. ಮೇ 14ರ ಸಂಜೆ 5.30 ರವರೆಗೆ ಆನ್‍ಲೈನ್ ಮೂಲಕ https://www.ksrtc.org/transfer/ ರಲ್ಲಿ ಸಾಮಾನ್ಯ, ಪತಿ-ಪತ್ನಿ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಸಾರಿಗೆ ನಿಗಮ ಪ್ರಕಟಣೆ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News