VIDEO- ಸಚಿವ, ಉಪ ಮುಖ್ಯಮಂತ್ರಿಯಾಗಿದ್ದರೂ ಈಗಲೂ ನನ್ನನ್ನು ದೇವಸ್ಥಾನದೊಳಗಡೆ ಸೇರಿಸಲ್ಲ: ಡಾ. ಪರಮೇಶ್ವರ್

Update: 2022-04-14 12:17 GMT
ಡಾ. ಪರಮೇಶ್ವರ್

ಕೊರಟಗೆರೆ: 'ಶಾಸಕನಾಗಿದ್ದೇನೆ ಸಚಿವನಾಗಿದ್ದೇನೆ, ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ ಆದರೆ, ಈಗಲೂ ನನ್ನನ್ನು ದೇವಸ್ಥಾನದೊಳಗಡೆ ಸೇರಿಸಲ್ಲ' ಎಂದು ಶಾಸಕ ಡಾ.ಜಿ. ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.

ಕೊರಟಗೆರೆಯಲ್ಲಿ ಗುರುವಾರ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  'ನಾನು ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದೆ, ಹಲವು ಬಾರಿ ಶಾಸಕನಾಗಿ ಮಂತ್ರಿಯಾಗಿ ಅತ್ಯುನ್ನತ ಡಾಕ್ಟರೇಟ್ ಪದವಿಯನ್ನೂ ಪಡೆದು ಹಲವು ದೇಶ ಸುತ್ತಿ ಬಂದಿರುವೆ. ನನ್ನನ್ನು ದೇವಸ್ತಾನದೊಳಗಡೆ ಬಿಡಬೇಕಲ್ಲ? ಆದರೆ ನಾನು ದಲಿತ ಎಂಬ ಕಾರಣಕ್ಕೆ ದೇವಾಲಯಗಳಲ್ಲಿ ನನ್ನನ್ನು ಒಳಗೆ ಬಿಟ್ಟುಕೊಳ್ಳುವುದಿಲ್ಲ' ಎಂದು ಶಾಸಕ ಡಾ.ಜಿ.ಪರಮೇಶ್ವರ್ ಅವರು ಹೇಳಿದರು. 

ಇಂಥ ಪರಿಸ್ಥಿತಿ ಈಗಲೂ ಸಮಾಜದಲ್ಲಿ ನಡೆಯುತ್ತಿದೆ ಎಂದರೆ ಏನು ಹೇಳಬೇಕು ನಾವು? ಎಂದು ವಿಷಾದ ವ್ಯಕ್ತಪಡಿಸಿದರು. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News