ಗುಜರಾತ್ ಕಾಂಗ್ರೆಸ್‌ನ ಮಾಜಿ ಶಾಸಕ ಇಂದ್ರನೀಲ್ ಆಪ್‌ಗೆ ಸೇರ್ಪಡೆ

Update: 2022-04-14 17:55 GMT

ಅಹ್ಮದಾಬಾದ್, ಎ. 14: ಗುಜರಾತ್ ಕಾಂಗ್ರೆಸ್‌ನ ಮಾಜಿ ಶಾಸಕ ಇಂದ್ರನೀಲ್ ರಾಜಗುರು ಅವರು ರಾಜ್‌ಕೋಟ್‌ನಲ್ಲಿ ಗುರುವಾರ ಆಮ್ ಆದ್ಮಿ ಪಕ್ಷ (ಆಪ್) ಸೇರಿದ್ದಾರೆ. ಜನರ ಸೇವೆ ಮಾಡಲು ಹಾಗೂ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಬುಡಮೇಲು ಮಾಡಲು ಆಪ್ ಸರಿಯಾದ ಆಯ್ಕೆ ಎಂದು ಅವರು ಹೇಳಿದ್ದಾರೆ.

ಆಪ್ ವರಿಷ್ಠ ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಶಂಸಿದ ರಾಜಗುರು, ದಿಲ್ಲಿ ಮುಖ್ಯಮಂತ್ರಿ ಜನರಿಗಾಗಿ ಹೋರಾಡುತ್ತಿದ್ದಾರೆ. ಪಕ್ಷಕ್ಕಾಗಿ ಅಲ್ಲ ಎಂದರು. ‘‘ಈ ನಡವಳಿಕೆ ನನ್ನ ಮೇಲೆ ತೀವ್ರ ಪ್ರಭಾವ ಬೀರಿತು. ಜನರ ಸೇವೆ ಮಾಡಬೇಕು ಎಂಬ ಉದ್ದೇಶದಿಂದ ನಾನು ಮೊದಲಿನಿಂದಲೂ ಕಾಂಗ್ರೆಸ್‌ನಲ್ಲೇ ಇದ್ದೆ. ಬಿಜೆಪಿ ಜನರನ್ನು ಮೂರ್ಖರನ್ನಾಗಿಸುವ ಮೂಲಕ ಅಧಿಕಾರ ಪಡೆದಿದೆ. ಕಾಂಗ್ರೆಸ್‌ಗೆ ಪರ್ಯಾಯ ಪಕ್ಷವಾಗುವ ಸಾಮರ್ಥ್ಯ ಇಲ್ಲ. ಬಿಜೆಪಿಯನ್ನು ಸೋಲಿಸುವ ಇಚ್ಛಾಶಕ್ತಿ ಕಾಂಗ್ರೆಸ್‌ಗೆ ಇಲ್ಲ. ಇದುವೇ ತಾನು ಕಾಂಗ್ರೆಸ್ ತ್ಯಜಿಸಲು ಕಾರಣ’’ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News