ರಾಮನಗರ | ಕಾಂಗ್ರೆಸ್ ಮುಖಂಡನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2022-04-15 12:02 GMT

ಬೆಂಗಳೂರು, ಎ.15: ರಾಮನಗರ ತಾಲೂಕಿನ ಬೈರವನದೊಡ್ಡಿಯ ತೋಟದ ಮನೆಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡ ಗಂಟಪ್ಪ ಅವರ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಬಿಡದಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಗಂಟಪ್ಪ(55) ಅವರ ಕೊಲೆಗೆ ಸುಪಾರಿ ನೀಡಿದ್ದ ಆರೋಪದಡಿ ಚೈತ್ರಾ ಹಾಗೂ ಆಕೆಯ ಪ್ರಿಯಕರ ಕನಕಪುರ ತಾಲೂಕಿನ ಸೊಂಟನಹಳ್ಳಿಯ ನವೀನ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಫೆ.25ರ ರಾತ್ರಿ ಬೈರವನದೊಡ್ಡಿಯ ತೋಟದ ಮನೆಯಲ್ಲಿ ಗಂಟಪ್ಪ ಅವರನ್ನು ಕೊಲೆ ಮಾಡಲಾಗಿದ್ದು, ಪ್ರಕರಣವನ್ನು ಒಂದೂವರೆ ತಿಂಗಳ ಬಳಿಕ ಪೊಲೀಸರು ಭೇದಿಸಿದ್ದಾರೆ. ಆಸ್ತಿಯಲ್ಲಿ ಪಾಲು ಕೊಟ್ಟಿಲ್ಲ ಎಂದು ಮಾವನ ಹತ್ಯೆಗೆ ಪ್ರಿಯಕರ ನವೀನ್‍ಗೆ ಚೈತ್ರಾ ಸುಪಾರಿ ನೀಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News