​ಕಲಬುರಗಿ: ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಮೃತ್ಯು

Update: 2022-04-16 16:01 GMT

ಕಲಬುರಗಿ: ಕಂಬವೇರಿ ವಿದ್ಯುತ್ ಲೈನ್ ದುರಸ್ಥಿ ಮಾಡುತ್ತಿದ ವೇಳೆ ಒರ್ವ ಲೈನ್ ಮ್ಯಾನ್ ಮೃತಪಟ್ಟಿದ್ದು, ಇನ್ನೋರ್ವನ್ನು ಜೀವನ ಮರಣದ ನಡುವೆ ಹೋರಾಟ ನಡೆಸಿತ್ತಿರುವ ಘಟನೆ ಇಲ್ಲಿನ ಚಿಂಚೋಳಿ ತಾಲ್ಲೂಕಿನ ಐನೋಳಿ ಗ್ರಾಮದಲ್ಲಿ ಶನಿವಾರ ಅಪಾರ್ಹನ್ನ ಸಂಭವಿಸಿದೆ. 

ಐನೋಳಿ ಜೆಸ್ಕಾಂ ಲೈನ್ ಮ್ಯಾನ್ ಸದ್ದಾಂ ಮೃತಪಟ್ಟಿದ್ದು, ಇನ್ನೋರ್ವ ಪಠಾಣ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಐನೋಳ್ಳಿ ಗ್ರಾಮಕ್ಕೆ ವಿದ್ಯುತ್ ಲೈನ್ ಹಾಕುವಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ. 

ಅವಘಡಕ್ಕೆ ಜೆಸ್ಕಾಂ ಅಧಿಕಾರಿ ಮತ್ತು ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಐನೋಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News