ಹುಬ್ಬಳ್ಳಿ ಘಟನೆಗೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

Update: 2022-04-17 08:09 GMT

ವಿಜಯನಗರ : ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಘಟನೆಗೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ. ಇದನ್ನು ಕಾನೂನು ಸುವ್ಯವಸ್ಥೆಯ ಘಟನೆ ಎಂದು ನೋಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ರವಿವಾರ ಇಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವುದಕ್ಕೆ ಬಂದಿದ್ದ ಅವರು, ವಾಟ್ಸ್‌ಆ್ಯಪ್‌ ಪೋಸ್ಟ್‌ ಸಂಬಂಧಿಸಿದವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಚೋದನಕಾರಿಯಾಗಿ ಪೊಲೀಸ್‌ ಠಾಣೆ ಎದುರು ಬಂದು ಗಲಾಟೆ ಮಾಡಿ, ಕಲ್ಲು ತೂರಾಟ ನಡೆಸಿದ್ದು ತೀವ್ರ ಅಕ್ಷಮ್ಯ ಎಂದು ಸಿಎಂ ಸುದ್ದಿಗಾರರಿಗೆ ಹೇಳಿದರು.

ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದರೂ ಕೂಡ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಜರುಗಿಸಲಾಗುವುದು. ಈ ಘಟನೆ, ಪ್ರಚೋದನೆ ಹಿಂದೆ ಇರುವವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ಈ ತರಹದ ಸಂಘಟನೆಗಳು ಕಾನೂನು ಕೈಗೆತ್ತಿಕೊಳ್ಳುವ ಸಾಹಸ ಮಾಡಬಾರದು. ಅದನ್ನು ಸಹಿಸುವುದಿಲ್ಲ. ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News