ತೆಂಗಿನ ಮರ ಬಿದ್ದು ಮೃತ್ಯು

Update: 2022-04-17 15:20 GMT

ಕೋಟ : ಜೆಸಿಬಿ ಮೂಲಕ ತೆರವುಗೊಳಿಸುವಾಗ ತೆಂಗಿನ ಮರ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆ ಯಲ್ಲಿ ಮೃತಪಟ್ಟ ಘಟನೆ ಕಾವಡಿ ಗ್ರಾಮದ ಸಸಿಹಿತ್ಲು ಎಂಬಲ್ಲಿ ನಡೆದಿದೆ.

ಮೃತರನ್ನು ಕಾವಡಿ ಗ್ರಾಮದ ಸಸಿಹಿತ್ಲು ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಎ.15ರಂದು ಮಧ್ಯಾಹ್ನ ವೇಳೆ ಇವರು ಚಾಲಕ ಚಂದ್ರಶೇಖರ್ ಎಂಬವರಿಗೆ ಜೆಸಿಬಿ ಮೂಲಕ ಬೀಳುವ ಸ್ಥಿತಿಯಲ್ಲಿದ್ದ ತೆಂಗಿನ ಮರವನ್ನು ತೆರವುಗೊಳಿಸಲು ತಿಳಿಸಿದ್ದರು. ಆದರೆ ಜೆಸಿಬಿ ಚಾಲಕ ಯಾವುದೇ ಸೂಚನೇ ನೀಡದೇ ಒಮ್ಮೇಲೆ ಮರವನ್ನು ದೂಡಿದ ಕಾರಣ, ಮರ ರಮೇಶ ಎಂಬವರ ಮೇಲೆ ಬಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಮಣಿಪಾಲ ಆಸ್ಪತ್ರೆಗೆ ದಾಖ ಲಾಗಿದ್ದ ಇವರು, ಎ.15ರಂದು ರಾತ್ರಿ  ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News