ಅಧಿಕಾರ ವಹಿಸಿಕೊಳ್ಳಲು ಹೊರಟಿದ್ದ ವಿಜಯಪುರದ ನೂತನ ಜಿಲ್ಲಾಧಿಕಾರಿ ಕಾರು ಅಪಘಾತ

Update: 2022-04-19 07:14 GMT
ವಿಜಯಮಹಾಂತೇಶ ದಾನಮ್ಮ | ಅಪಘಾತಕ್ಕೀಡಾದ ಕಾರು

ಧಾರವಾಡ: ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ತೆರಳಿದ್ದ ನೂತನ ಡಿಸಿ ವಿಜಯಮಹಾಂತೇಶ ದಾನಮ್ಮ ಅವರ ಕಾರು ಅಪಘಾತಕ್ಕೀಡಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. 

ಮಂಗಳವಾರ ಬೆಳಗ್ಗೆ  ಧಾರವಾಡ ತಾಲೂಕಿನ ಯರಿಕೊಪ್ಪ ಬೈಪಾಸ್ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. 

ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅವರು ಅಧಿಕಾರ ವಹಿಸಿಕೊಳ್ಳಲು ಇಂದು ಕುಟುಂಬ ಸಮೇತ ಹೊರಟಿದ್ದರು ಎನ್ನಲಾಗಿದೆ. ಈ ವೇಳೆ ರಾಷ್ಟ್ರೀಯ ಹೆದ್ದಾರಿಯ ಯರಿಕೊಪ್ಪ ಬೈಪಾಸ್ ಸಮೀಪ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಜಿಲ್ಲಾಧಿಕಾರಿ ಸೇರಿ ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದು, ಕಾರಿನಲ್ಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಸದ್ಯ ಎಲ್ಲರನ್ನೂ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. 

ದಾನಮ್ಮನವರ ವರ್ಗಾವಣೆ ಆದೇಶ ನಿನ್ನೆಯಷ್ಟೇ ಬಂದಿತ್ತು. ವಿಜಯಪುರ ಜಿಲ್ಲಾಧಿಕಾರಿಯಾಗಲು ಹೊರಟಿದ್ದ ಸಮಯದಲ್ಲಿಯೇ ಈ ದುರ್ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News