ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುತ್ತಿಲ್ಲ: ವಿದ್ಯತ್ ನಿಗಮ ಸ್ಪಷ್ಟನೆ
Update: 2022-04-19 13:08 GMT
ಬೆಂಗಳೂರು, ಎ.19: ರಾಜ್ಯದಲ್ಲಿರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳನ್ನು ರಾಜ್ಯ ಸರಕಾರವಾಗಲೀ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತವಾಗಲೀ ಖಾಸಗಿ ಸಂಸ್ಥೆಗಳಿಗೆ ವಹಿಸುತ್ತಿಲ್ಲ ಎಂದು ನಿಗಮವು ಸ್ಪಷ್ಟನೆ ನೀಡಿದೆ.
ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ ಹಾಗೂ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳನ್ನು ಖಾಸಗಿಯವರಿಗೆ ವಹಿಸಲು ಸರಕಾರ ಚಿಂತನೆ ಮಾಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇಂತಹ ಯಾವ ಕ್ರಮಕ್ಕೂ ಸರಕಾರ ಮುಂದಾಗಿಲ್ಲ ಎಂದು ತಿಳಿಸಿದೆ.