ಹೆಬ್ರಿ: ಪ್ರಿಯಕರ ಫೋನ್ ಕರೆ ಸ್ವೀಕರಿಸಿಲ್ಲ ಎಂದು ಯುವತಿ ಆತ್ಮಹತ್ಯೆ

Update: 2022-06-19 04:51 GMT

ಹೆಬ್ರಿ : ಪ್ರಿಯಕರ ಫೋನ್ ಕರೆ ಸ್ವೀಕರಿಸಿಲ್ಲ ಎಂಬ ಕಾರಣಕ್ಕಾಗಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಬ್ರಹ್ಮಾವರ ತಾಲ್ಲೂಕು ಕಳ್ತೂರು ಗ್ರಾಮದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಇಡುಕಿಣಿ ಗ್ರಾಮದ ಹಿರೇಬೈಲು ನಿವಾಸಿ ಮಧು ಎಂಬವರ ಮಗಳು ಕುಸುಮಾ(19) ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದು ತಿಂಗಳಿಂದ ಸಂತೆಕಟ್ಟೆಯಲ್ಲಿ ಹೋಂ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದರು.

ಇವರು ಚಿಕ್ಕಮಗಳೂರು ಜಿಲ್ಲೆಯ ರಾಹುಲ್ ಎಂಬವರನ್ನು ಪ್ರೀತಿ ಮಾಡುತ್ತಿದ್ದು, ಆತನ ಪೋನ್ ಕರೆಯನ್ನು ಸ್ವೀಕರಿಸಿಲ್ಲ ಎಂಬ ಕಾರಣದಿಂದ ಬೇಸರಗೊಂಡು ಕುಸುಮಾ, ಎ.11ರಂದು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಎ.13ರಂದು ತೀವ್ರವಾಗಿ ಅಸ್ವಸ್ಥಗೊಂಡ ಆಕೆಯನ್ನು ಉಡುಪಿ ಅಜ್ಜರ ಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎ.17ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News