ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು: ಈ ಕುರಿತು ಮಾಜಿ ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ...

Update: 2022-04-21 11:56 GMT

ಬೆಂಗಳೂರು: ನಗರದ ಸೋಗಾನೆಯಲ್ಲಿ ನಿರ್ಮಾಣವಾಗಲಿರುವ ವಿಮಾನನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಇಡುವ ಬಗ್ಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. 

ಈ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ , ''ನನಗೆ ಆ ಬಗ್ಗೆ ಆಸಕ್ತಿಯಿಲ್ಲ. ಆದ್ರೆ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಮುಂದೆ ನೊಡೋಣಾ' ಎಂದು ಹೇಳಿದ್ದಾರೆ.

ಬುಧವಾರ ಶಿವಮೊಗ್ಗ ನಗರದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ 'ಯಡಿಯೂರಪ್ಪ ಅವರ ಹೆಸರು ಇಡಲು ಸಚಿವ ಸಂಪುಟ ತೀರ್ಮಾನಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳೀಕೆ ನೀಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News