ಚಾಮರಾಜನಗರ: ಕಿಡಿಗೇಡಿಗಳಿಂದ ಅಂಬೇಡ್ಕರ್ ಭಾವಚಿತ್ರ ವಿರೂಪ
Update: 2022-04-22 04:14 GMT
ಚಾಮರಾಜನಗರ, ಎ.22: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ವಿರೂಪಗೊಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಳಚವಾಡಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಬೆಳಚವಾಡಿ ಗ್ರಾಮದ ಹೊರವಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಮುಖದ ಭಾಗ ಕತ್ತರಿಸಿದಲ್ಲದೆ, ಎದೆಯ ಭಾಗವನ್ನು ಚಂದ್ರನ ಗುರುತು ಬರುವಂತೆ ಕತ್ತರಿಸಲಾಗಿದೆ. ಪಕ್ಕದಲ್ಲಿ 786 ಎಂದು ಕತ್ತರಿಸಿ ಕಿಡಿಗೇಡಿಗಳು ವಿಕೃತ ಮೆರೆದಿದ್ದಾರೆ.
ಬೇಗೂರು ಪೊಲೀಸ್ ಠಾಣೆಯ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.