ಹುಬ್ಬಳ್ಳಿ ದಾಂಧಲೆ ಪ್ರಕರಣ: ಆರೋಪಿ ವಾಸೀಂ ಪಠಾಣ್‍ ಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Update: 2022-04-22 13:33 GMT

ಹುಬ್ಬಳ್ಳಿ, ಎ.22: ಹಳೆ ಹುಬ್ಬಳ್ಳಿಯ ಗಲಭೆಯ ಪ್ರಮುಖ ಆರೋಪಿ ಎನ್ನಲಾಗಿರುವ ವಾಸೀಂ ಪಠಾಣ್‍ನನ್ನು ಬೆಳಗಾವಿಯಿಂದ ಬಂಧಿಸಿ ಹುಬ್ಬಳ್ಳಿಗೆ ಕರೆತಂದು ವಿಚಾರಣೆ ನಡೆಸಿದ ಪೊಲೀಸರು ತಡರಾತ್ರಿ ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ದಾರೆ. ಅಲ್ಲದೆ, ಆರೋಪಿ ಪಠಾಣ್‍ನನ್ನು ಹುಬ್ಬಳ್ಳಿಯ ಸಬ್ ಜೈಲಿಗೆ ಹಾಕಲಾಗಿದೆ. 

ಗುರುವಾರ ಮಧ್ಯಾಹ್ನ ಬಂಧಿತನಾಗಿದ್ದ ಆರೋಪಿಯನ್ನು ಕಮಿಷನರ್ ಹಾಗೂ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ತೀವ್ರ ವಿಚಾರಣೆ ನಡೆಸಿ ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ತೀವ್ರ ವಿಚಾರಣೆ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮಾಸ್ಟರ್ ಮೈಂಡ್ ವಾಸೀಂ ಪಠಾಣ್‍ನನ್ನು ಹುಬ್ಬಳ್ಳಿಯ ಸಬ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News