ಹುಬ್ಬಳ್ಳಿ ದಾಂಧಲೆ ಪ್ರಕರಣ: ಕಾರ್ಪೊರೇಟರ್, ಎಐಎಂಐಎಂ ಮುಖಂಡ ವಶಕ್ಕೆ
Update: 2022-04-23 10:37 GMT
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರೊಬ್ಬರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಲ್ಲಿನ 71 ನೇ ವಾರ್ಡ್ನ ಸದಸ್ಯ, ಎಐಎಂಐ ಪಕ್ಷದ ಮುಖಂಡನಾಗಿರುವ ನಜೀರ್ ಹೊನ್ಯಾಳ ಗಲಭೆಗೆ ಪ್ರಚೋದನೆ ನೀಡಿದ್ದಾನೆಂಬ ಆರೋಪದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿ ಅಭಿಷೇಕ್ ಹಿರೇಮಠ ಎಂಬಾತ ಸಾಮಾಜಿಕ ಮಾಧ್ಯಮ ವಾಟ್ಸ್ ಆ್ಯಪ್ ನಲ್ಲಿ ಹಾಕಿದ್ದ ವಿವಾದಾತ್ಮಕ ಸ್ಟೇಟಸ್ ಕಾರಣ ಎಪ್ರಿಲ್ 16ರಂದು ರಾತ್ರಿ ಹಳೇ ಹುಬ್ಬಳ್ಳಿಯಲ್ಲಿ ಹಿಂಸಾಚಾರ ನಡೆದಿತ್ತು. ಈ ವೇಳೆ ನಗರದಲ್ಲಿ ಕಲ್ಲು ತೂರಾಟ ನಡೆದಿದ್ದು, ಇನ್ ಸ್ಪೆಕ್ಟರ್ ಸೇರಿದಂತೆ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ 100ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.