×
Ad

ನಾಲ್ಕನೆ ಹಂತದ ʼಸ್ವಚ್ಛ ಕಡಲ ತೀರ -ಹಸಿರು ಕೋಡಿʼ ಅಭಿಯಾನ

Update: 2022-04-24 16:47 IST

ಕುಂದಾಪುರ : ಕೋಡಿ ಬ್ಯಾರೀಸ್ ವಿದ್ಯಾ ಸಂಸ್ಥೆ ವತಿಯಿಂದ ಪ್ರತಿ ತಿಂಗಳ ಕೊನೆಯ ರವಿವಾರ ನಡೆಸುತ್ತಿರುವ ಸ್ವಚ್ಛ ಕಡಲ ತೀರ -ಹಸಿರು ಕೋಡಿ  ಅಭಿಯಾನ 2022ರ 4 ನೆಯ ಹಂತ ಇಂದು ನಡೆಯಿತು.

ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸಯ್ಯದ್ ಮೊಹಮ್ಮದ್ ಬ್ಯಾರಿ ಮಾತನಾಡಿ, ವಿಶ್ವ ಭೂ ದಿನಾಚರಣೆಯಂದು ನಡೆಯುತ್ತಿರುವ ಈ ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ಹೊಸ ಮೆರುಗನ್ನು ಕೊಟ್ಟಿದೆ ಮತ್ತು ಸಾರ್ಥಕ ಭಾವ ತುಂಬಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಪೋಷಕರು, ಪ್ರಾಕ್ತನ ವಿದ್ಯಾರ್ಥಿಗಳು, ಊರಿನ ಪ್ರಮುಖರು ಹಾಗೂ ಸ್ಥಳೀಯರು ಮತ್ತು ನಿಸರ್ಗ ಪ್ರಿಯರು ಈ ಅಭಿಯಾನ ದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಕೋಡಿಯ ಕಡಲ ತೀರವನ್ನು ಸ್ವಚ್ಛಗೊಳಿಸಿದರು. ಬ್ಯಾರೀಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷ ಹಾಜಿ ಕೆ ಎಂ ಅಬ್ದುಲ್ ರಹ್ಮಾನ್‌ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News