×
Ad

ಬೆಂಗಳೂರು | 10 ಶ್ವಾನಗಳಿಗೆ ವಿಷವಿಟ್ಟು ಕೊಲೆ; ದೂರು

Update: 2022-04-24 19:49 IST

ಬೆಂಗಳೂರು, ಎ. 24: ಹತ್ತು ಶ್ವಾನಗಳಿಗೆ ವಿಷವಿಟ್ಟು ಸಾಯಿಸಿದ ಅಮಾನವೀಯ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ವರದಿಯಾಗಿದೆ.

ರಾತ್ರಿ ಹೊತ್ತು ನಾಯಿಗಳು ಬೊಗಳುತ್ತವೆ ಎಂದು ಅಪಾರ್ಟ್‍ಮೆಂಟ್ ಬಳಿ ಇದ್ದ ಶ್ವಾನಗಳಿಗೆ ದುಷ್ಕರ್ಮಿಗಳು ವಿಷವುಣಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಪ್ರಾಣಿಪ್ರಿಯ ಸಂಘದ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಘಟನೆ ಸಂಬಂಧ ಸಾಮಾಜಿಕ ಹೋರಾಟಗಾರ ಅರುಣ್ ಎಂಬುವರು ದೂರು ನೀಡಿದ್ದು, ಪ್ರಾಣಿಗಳಿಗೆ ವಿಷ ಹಾಕಿ ಕೊಲ್ಲುವುದು ವನ್ಯಜೀವಿ ಸಂರಕ್ಷಣೆ ಕಾಯ್ದೆ 1972 ಅಡಿಯಲ್ಲಿ ಪ್ರಕರಣ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News