ಚಂದ್ರು ಕೊಲೆಗೆ ಉರ್ದು ಭಾಷೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

Update: 2022-04-24 18:19 GMT

ಬೆಂಗಳೂರು, ಎ.24: ಇಲ್ಲಿನ ಜೆ.ಜೆ.ನಗರದ ವ್ಯಾಪ್ತಿಯಲ್ಲಿ ಏ.5ರಂದು ನಡೆದ ಚಂದ್ರು ಕೊಲೆ ಪ್ರಕರಣ ಸಂಬಂಧ ಉರ್ದು ಭಾಷೆ ಕಾರಣವಲ್ಲ ಎಂದುಕೇಂದ್ರ ಗೃಹ ಇಲಾಖೆಗೆ ಕೇಂದ್ರ ಗುಪ್ತಚರ ಇಲಾಖೆ ವರದಿ ನೀಡಿದೆ ಎಂದು ತಿಳಿದುಬಂದಿದೆ.

ಕೊಲೆ ಬೈಕ್‍ ವಿಚಾರವಾಗಿ ನಡೆದ ಜಗಳವೇ ಪ್ರಮುಖ ಕಾರಣವಾಗಿದೆ ಹೊರತು ಉರ್ದು ಭಾಷೆಯಲ್ಲಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆಎಂದು ಹೇಳಲಾಗುತ್ತಿದೆ.

ಪ್ರಕರಣ ಸಂಬಂಧ ಘಟನೆಯಲ್ಲಿ ಹಲ್ಲೆಗೊಳಗಾಗಿದ್ದ ಚಂದ್ರು ಸ್ನೇಹಿತ ಸೈಮನ್‍ರಾಜು ಹಾಗೂ ಸ್ಥಳೀಯರ ಹೇಳಿಕೆಗಳನ್ನು ಸಂಗ್ರಹಿಸಿದ ಗುಪ್ತದಳ ವರದಿ ತಯಾರಿಸಿದೆ.

ಇನ್ನೂ, ಬೈಕ್‍ ತಾಕಿದ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಜಗಳ ನಡೆದು ಕೊನೆಗೆ ಚಂದ್ರು ಕೊಲೆಯಲ್ಲಿ ಅಂತ್ಯವಾಗಿದೆ ಎಂಬುದು ಗೊತ್ತಾಯಿತು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News