×
Ad

ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಒಂದೇ ಕುಟುಂಬದ ಇಬ್ಬರು ಮೃತ್ಯು

Update: 2022-04-25 13:22 IST
ಸಾಂದರ್ಭಿಕ ಚಿತ್ರ

ರಾಮನಗರ, ಎ.25: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಬಾಲಕ ಸಹಿತ ಒಂದೇ ಕುಟುಂಬದ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಗರ ಹೊರವಲಯದ ಕುಂಭಾಪುರ ಗೇಟ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿರುವುದು ವರದಿಯಾಗಿದೆ.

ಮೃತರನ್ನು ಸುಂದ್ರೇಶ್(49) ಹಾಗೂ ತನ್ಮಯ್(9) ಎಂದು ಗುರುತಿಸಲಾಗಿದೆ.

ಒಂದೇ ಕುಟುಂಬದ ಐವರು ಇಂದು ಬೆಳಗ್ಗೆ ಮದ್ದೂರಿನಿಂದ ಬೆಂಗಳೂರಿಗೆ ಓಮ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇವರಿದ್ದ ಕಾರು ಕುಂಭಾಪುರ ಗೇಟ್ ಬಳಿ ತಲುಪಿದಾಗ ಮರವೊಂದು ಏಕಾಏಕಿ ಮುರಿದು ಇವರ ಕಾರಿನ ಮೇಲೆ ಬಿದ್ದಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಶೀಲಾ, ಗಾನವಿ ಹಾಗೂ ಸಾನವಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News